ಇಸ್ರೇಲ್ನಲ್ಲಿ ತೀರ್ಪನ್ನು ಚಿತ್ರಿಸಲು ಹೀಬ್ರೂ ವೇದಗಳು ಅಂಜೂರದ ಮರವನ್ನು ಬಳಸಿದವು

12 ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.

ಜೋಯಲ್ 1:12

9 “ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ಅಮೋಸ್ 4: 9

19 ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”

ಹಗ್ಗೈ 2:19

4 ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.

ಯೆಶಾಯ 34: 4

13 ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.

ಯೆರೆಮಿಾಯ 8:13