ನೋಹ ಮತ್ತು ಪ್ರವಾಹದ ವೃತ್ತಾಂತ: ಆದಿಕಾಂಡ 6-9

ಮನುಷ್ಯರ ಕೆಟ್ಟತನ

 ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು2 ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.3 ಆಗ ಯೆಹೋವನು, “ ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.4 ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.5 ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.6 ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.7 ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.8 ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.ನೋಹನ ಚರಿತ್ರೆ9 ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.10 ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.11 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.12 ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.13 ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.14 ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.15 ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.16 ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.17 ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.18 “ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.19 ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.20 ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು.21 ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು.22 ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.

ಆದಿಕಾಂಡ 6

ನೋಹನೊಡನೆ ಒಡಂಬಡಿಕೆ

ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.2 ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.3 ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.4 ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.5 ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?6 ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.7 ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು.8 ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ,9 “ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು.10 ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.11 ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು.12 ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು.13 ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.14 ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಕಾಮನಬಿಲ್ಲು ಮೇಘಗಳಲ್ಲಿ ಕಂಡುಬರುವುದು.15 ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.16 ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.17 ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು.ಶೇಮ್ ಯೆಫೆತರಿಗೆ ಸಿಕ್ಕ ಆಶೀರ್ವಾದ, ಕಾನಾನ್ಯರಿಗೆ ದೊರೆತ ಶಾಪ18 ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.19 ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು.

ಆದಿಕಾಂಡ 9